[ ಮೊದಲ ಲೇಖನದಲ್ಲೇ ತಿಳಿಸಿದಂತೆ 'ಜ್ಞಾನಮೂರ್ತಿ' ಯವರು ನನಗೆಅನಿರೀಕ್ಷಿತವಾಗಿ ಆರ್ಕುಟ್ನಲ್ಲಿ ಪರಿಚಯವಾದವರು.. ಕಾಲ ಕಳೆದಂತೆ ಆಪರಿಚಯ ನಮ್ಮಿಬ್ಬರ ನಡುವೆ ಗಾಢವಾದ ಸ್ನೇಹಕ್ಕೆ ಕಾರಣವಾಯಿತು,ಇಬ್ಬರುತುಂಬಾ ಆತ್ಮೀಯರಾದೆವು .. ಅವರ ಜನ್ಮದಿನದ ಸಂದರ್ಭದಲ್ಲಿ ಅವರು ನನಗೆಕಾಣಿಕೆ ಕೊಡುವೆನೆಂದು ಹೇಳಿ ಅವರ ಬ್ಲಾಗ್ ಲಿಂಕ್ ಕೊಟ್ಟಿದ್ದರು.. ಅದೇ ಪ್ರಥಮನಾನು ಬ್ಲಾಗ್ ನೋಡಿದ್ದು.. ನಂತರ ಬ್ಲಾಗ್ ಬಗ್ಗೆ ಸಂಪೂರ್ಣ ವಿವರಿಸಿ ನನ್ನನ್ನುಬ್ಲಾಗ್ ಮಾಡಲು ಪ್ರೇರೇಪಿಸಿದ್ದರು.. ಮೊದಮೊದಲು ನನಗೆ ಅದುಹಾಸ್ಯವೆನಿಸಿದರೂ ಬರುಬರುತ್ತಾ ನನಗೂ ಬರೆಯಬೇಕೆಂಬ ಆಸೆಮೊಳೆಯಿತು..ಅವರನ್ನು ಒಮ್ಮೆ ಭೇಟಿಯಾಗಿದ್ದಾಗ ಅವರು ನನಗೊಂದು ಕಾಣಿಕೆನೀಡಿದ್ದರು, ಮನೆಗೆ ಬಂದು ಅದನ್ನು ತೆರೆದಾಗಲೇ ತಿಳಿದಿದ್ದು ಅದು 'ಲೇಖನಿಯೆಂದು'.. ಅವರ ಲೇಖನಿಯಿಂದ ಹಾಗೂ ಅವರ ಮಾತಿನಿಂದ ಇನ್ನಷ್ಟುಪ್ರೇರೆಪಿತನಾದ ನಾನು ಅಂದೇ ಬರೆಯಲು ನಿರ್ಧರಿಸಿ ಆ ಲೇಖನಿಯ ಮೇಲೆಯೇನನ್ನ 'ಕೈಚಳಕ' ಪ್ರಯೋಗಿಸಿದೆ.. ಆಗ ಮೂಡಿಬಂದ 'ನೆನಪಿನ ಕಾಣಿಕೆಯಲ್ಲಿ' ಎಂಬ ಈ ಕವನವನ್ನು ಈಗ ನಿಮ್ಮ ಮುಂದಿಟ್ಟಿದ್ದೇನೆ..
ನನ್ನ ಮೊದಲ ಪ್ರಯೋಗದ ಬಗ್ಗೆ ನಿಮ್ಮ ಅನಿಸಿಕೆ ಹೇಗಿದೆ ಎಂದು ತಿಳಿಯುವ ಕುತೂಹಲದಲ್ಲಿದ್ದೇನೆ.. ]
ನನ್ನ ಮೊದಲ ಪ್ರಯೋಗದ ಬಗ್ಗೆ ನಿಮ್ಮ ಅನಿಸಿಕೆ ಹೇಗಿದೆ ಎಂದು ತಿಳಿಯುವ ಕುತೂಹಲದಲ್ಲಿದ್ದೇನೆ.. ]
...

ಬರೆಯಲೇ ಒಂದು ಲೇಖನವ
ನೀ ಕೊಟ್ಟ ಲೇಖನಿಯಲ್ಲಿ,
ಬರೆಯಲೇ ಒಂದು ಸಿಹಿಗವನವ
ನೀ ಕೊಟ್ಟ ಲೇಖನಿಯಲ್ಲಿ,
ನೀ ಕೊಟ್ಟ ಲೇಖನಿಯಲ್ಲಿ,
ಬರೆಯಲೇ ಒಂದು ಸಿಹಿಗವನವ
ನೀ ಕೊಟ್ಟ ಲೇಖನಿಯಲ್ಲಿ,
ಬರೆಯಲೇ ಒಂದು ಸವಿಗೀತೆಯ
ನೀ ಕೊಟ್ಟ ಲೇಖನಿಯಲ್ಲಿ,
ಬರೆಯಲೇ ನನ್ನ ಆತ್ಮಕಥೆಯ
ನೀ ಕೊಟ್ಟ ಲೇಖನಿಯಲ್ಲಿ,
ನೀ ಕೊಟ್ಟ ಲೇಖನಿಯಲ್ಲಿ,
ಬರೆಯಲೇ ನಿಮಗೊಂದು ಸಂದೇಶವ
ನೀ ಕೊಟ್ಟ ಲೇಖನಿಯಲ್ಲಿ,
ಆ ನೆನಪಿನ ಕಾಣಿಕೆಯಲ್ಲಿ..
ಪರೀಕ್ಷಾರಂಗ ಎಂಬ ರಣರಂಗದಿ
ಖಡ್ಗದಂತ ಈ ಲೇಖನಿಯ ಹರಿತದಿ
ಶ್ವೇತಪುಟದ ಮೇಲೆ ಶಾಯಿನೆತ್ತರ
ಎರಚಾಡಿ ಹೋರಾಡಲೇ
ನೀ ಕೊಟ್ಟ ಲೇಖನಿಯಲ್ಲಿ..
ಆ ಲೇಖನಿಯಲ್ಲಿ ತುಂಬಿಕೊಂಡಿದೆ
ಶಾಯಿಯೆಂಬ ಜೀವದ್ರವ್ಯ
ಆ ಜೀವದ್ರವ್ಯದ ಕಣಕಣದಲ್ಲಿದೆ
ನಮ್ಮಿಬ್ಬರ ಮಧುರಬಾಂಧವ್ಯ..
ಚಿರನೂತನ ಸವಿಸ್ನೇಹಬಾಂಧವ್ಯ..
ಆದ್ದರಿಂದ..
ಬರೆಯಲಾರೆನು ಗುರುವೇ ಈ ಲೇಖನಿಯಲ್ಲಿ
ನೀವು ಕೊಟ್ಟ ನೆನಪಿನ ಕಾಣಿಕೆಯಲ್ಲಿ..
ನೆನಪಿಡಿ ಗುರುವೇ...
ಅಂತರ್ಜಲ ಬತ್ತಿಹೋಗುವ ತನಕ
ಲೇಖನಿಯ ಬರಿದುಮಾಡದೇ
ಕಾಯ್ದುಕೊಳ್ಳುವೆ ಜೀವದ್ರವ್ಯವ
ಎಂದೆಂದಿಗೂ ಅಮರವಾದ
ನಮ್ಮಿಬ್ಬರ ಅನುಬಾಂಧವ್ಯವ..
ಬರೆಯದೆ ಈ ನೆನಪಿನ ಕಾಣಿಕೆಯಲ್ಲಿ..
~ . ~